ಪೋಸ್ಟ್‌ಗಳು

ಜಗಜ್ಯೋತಿ ಬಸವಣ್ಣನವರು ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಬಸವಣ್ಣನವರ ವಚನಗಳು

ಇಮೇಜ್
ನುಡಿದರೆ ಮುತ್ತಿನ ಹಾರದಂತಿರಬೇಕು! ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು! ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು! ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು ? ನುಡಿಯೊಳಗಾಗಿ ನಡೆಯದಿದ್ದರೆ ಕೂಡಲಸಂಗಮದೇವನೆಂತೊಲಿವನಯ್ಯ ?  ಉಳ್ಳವರು ಶಿವಾಲಯವ ಮಾಡಿಹರು! ನಾನೇನ ಮಾಡುವೆ ? ಬಡವನಯ್ಯ! ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಶವಯ್ಯ! ಕೂಡಲಸಂಗಮದೇವ ಕೇಳಯ್ಯ, ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ!  ಎನ್ನ ನಡೆಯೊಂದು ಪರಿ | ಎನ್ನ ನುಡಿಯೊಂದು ಪರಿ | ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯ | ನುಡಿಗೆ ತಕ್ಕ ನಡೆಯ ಕಂಡರೆ ಕೂಡಲಸಂಗಮದೇವ ತನ್ನೊಳಗಿಪ್ಪನಯ್ಯ |  ಎನಗಿಂತ ಕಿರಿಯರಿಲ್ಲ! ಶಿವಭಕ್ತರಿಗಿಂತ ಹಿರಿಯರಿಲ್ಲ. ನಿಮ್ಮ ಪಾದ ಸಾಕ್ಷಿ ಎನ್ನ ಮನ ಸಾಕ್ಷಿ! ಕೂಡಲಸಂಗಮದೇವಾ ಎನಗಿದೇ ದಿಬ್ಯ.  ತಂದೆ ನೀನು, ತಾಯಿ ನೀನು; ಬಂಧು ನೀನು ಬಳಗ ನೀನು; ನೀನಲ್ಲದೆ ಮತ್ತಾರು ಇಲ್ಲವಯ್ಯ! ಕೂಡಲಸಂಗಮದೇವ, ಹಾಲಲದ್ದು ನೀರಲದ್ದು.  ವಚನದಲ್ಲಿ ನಾಮಾಮೃತ ತುಂಬಿ. ನಯನದಲ್ಲಿ ನಿಮ್ಮ ಮೂರುತಿ ತುಂಬಿ, ಮನದಲ್ಲಿ ನಿಮ್ಮ ನೆನಹು ತುಂಬಿ; ಕಿವಿಯಲ್ಲಿ ನಿಮ್ಮ ಕೀರುತಿ ತುಂಬಿ; ಕೂಡಲಸಂಗಮದೇವ, ನಿಮ್ಮ ಚರಣಕಮಲದೊಳಗಾನು ತುಂಬಿ!  ಎನ್ನ ವಾಮ-ಕ್ಷೇಮ ನಿಮ್ಮದಯ್ಯ ಎನ್ನ ಹಾನಿ-ವೃದ್ಧಿ ನಿಮ್ಮದಯ್ಯ ಎನ್ನ ಮಾನಾಪಮಾನವು ನಿಮ್ಮದಯ್ಯ ಬಳ್ಳಿಗೆ ಕಾಯಿ ದಿಮ್ಮಿತ್ತೆ ? ಕೂಡಲಸಂಗಮದೇವ.  ಇವನಾರವ, ಇವನಾರವ, ಇವ...